14
Friday
March, 2025

A News 365Times Venture

ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಕೋಲ್ಕತ್ತಾ,ಜನವರಿ,20,2025 (www.justkannada.in): ಕೋಲ್ಕತ್ತಾದ ಆರ್. ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ  ಸಿಲ್ದಾಹ್ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಸಿಲ್ದಾಹ್ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಅವರು ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರ್ ಜಿ ಕರ್ ಪ್ರಕರಣವು ಪಶ್ಚಿಮ ಬಂಗಾಳವನ್ನು ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇಂದು ಈ ಪ್ರಕರಣದ ಅಪರಾಧಿಗೆ ಶಿಕ್ಷೆ ಪ್ರಕಟಿಸಲಾಗಿದೆ.

ಆಗಸ್ಟ್ 9, 2024 ರಂದು, 36 ಗಂಟೆಗಳ ಪಾಳಿಯ ನಂತರ ವಿಶ್ರಾಂತಿ ಪಡೆಯಲು ಆಸ್ಪತ್ರೆಯ ಸೆಮಿನಾರ್ ಹಾಲ್‌ ನಲ್ಲಿ ಮಲಗಿದ್ದ ಯುವ ತರಬೇತಿ ವೈದ್ಯೆ  ಮೇಲೆ ಅತ್ಯಾಚಾರ  ನಡೆದು ಹತ್ಯೆಯಾಗಿತ್ತು.  ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದಿದ್ದ ಈ ಘಟನೆಗೆ ದೇಶವ್ಯಾಪಿ ಅಕ್ರೋಶ ವ್ಯಕ್ತವಾಗಿತ್ತು. ಸಿಸಿಟಿವಿ ದೃಶ್ಯಾವಳಿಯ ಆಧಾರದಲ್ಲಿ ಪೊಲೀಸರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್‌ ರಾಯ್‌ ನನ್ನು ಆಗಸ್ಟ್‌ 10 ರಂದು ಬಂಧಿಸಿದ್ದರು.  ಜನವರಿ 18 ರಂದು ಸಂಜಯ್ ರಾಯ್ ಪ್ರಕರಣದಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿ ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಇಂದಿಗೆ ಕಾಯ್ದಿರಿಸಿತ್ತು.

Key words: Doctor, rape, murder case, Convict, life imprisonment

The post ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹാരാഷ്ട്രയില്‍ ഷിംഗ ഉത്സവത്തിനിടെ രത്‌നഗിരി പള്ളിയില്‍ അതിക്രമിച്ച് കടക്കാന്‍ ശ്രമിച്ച് ഹിന്ദുത്വവാദികള്‍; വിമര്‍ശിച്ച് സോഷ്യല്‍ മീഡിയ

മുംബൈ: മഹാരാഷ്ട്രയില്‍ ഹോളി ആഘോഷിക്കുന്നതിന് മുമ്പേ രത്‌നഗിരിയിലെ പള്ളിയിലേക്ക് ഒരു കൂട്ടം...

"பாஜக கூட்டணி ஆட்சியில் மகளிருக்கு ரூ. 2500 உரிமைத் தொகை; மாவட்டத்திற்கு 2 நவோதயா பள்ளி – அண்ணாமலை

தென்காசி மாவட்ட பா.ஜ.க. சார்பில் தி.மு.க. அரசைக் கண்டித்து 'தீய சக்திகளை...

Off The Record : పాలకుర్తి కాంగ్రెస్‌లో రచ్చకు కారణం వాళ్లేనా..?

పాలకుర్తి కాంగ్రెస్‌లో రచ్చకు కారణం ఎవరు? సొంత పార్టీ నేతలేనా? లేక...

‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ...