14
Friday
March, 2025

A News 365Times Venture

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50 : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Date:

ಬೆಂಗಳೂರು,ಜನವರಿ,23,2025 (www.justkannada.in):  ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಂತ್ರೋಪಕರಣ ಕ್ಷೇತ್ರಕ್ಕೆ ಕರ್ನಾಟಕವು ಐದು ದಶಕಗಳ ಹಿಂದೆಯೇ ಬಲಿಷ್ಟವಾದ ಅಡಿಪಾಯ ಹಾಕಿದೆ. ಹಿಂದೂಸ್ತಾನ್ ಮಷಿನ್ ಅಂಡ್ ಟೂಲ್ಸ್ (HMT) ಈ ಕ್ಷೇತ್ರಕ್ಕೆ ಮಹೋನ್ನತ ಕೊಡುಗೆಯನ್ನು ನೀಡಿ, ಉತ್ಪಾದನಾ ಕ್ಷೇತ್ರದಲ್ಲಿ ಅನೇಕ ಮೈಲುಗಲ್ಲುಗಳನ್ನು ಸ್ಥಾಪಿಸಿತ್ತು. ಆಗಿನಿಂದಲೇ ಕರ್ನಾಟಕವು ನಾವೀನ್ಯತೆ ಮತ್ತು ಉತ್ಪಾದನಾ ಉತ್ಕೃಷ್ಟತೆಯನ್ನು ಪ್ರೋತ್ಸಾಹಿಸುವುದನ್ನು ಮುಂದುವರೆಸಿದೆ. ಪ್ರಸ್ತುತ, ಯಂತ್ರೋಪಕರಣ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಎಲ್ಲಾ ಆಯಾಮಗಳಲ್ಲಿಯೂ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಹೇಳಿದರು.

ತಂತ್ರಜ್ಞಾನದ ಉನ್ನತೀಕರಣ, ಕೌಶಲ್ಯ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಭಾರತ ಸ್ಪಷ್ಟ ಗುರಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಭಾರತೀಯ ಬಂಡವಾಳ ಸರಕುಗಳ ವಲಯದಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಹೇಳಿದರು.

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯವು ತುಮಕೂರಿನಲ್ಲಿ ಮಷಿನ್ ಅಂಡ್ ಟೂಲ್ ಪಾರ್ಕ್ ಸ್ಥಾಪನೆಗೆ ಉತ್ತೇಜನ  ನೀಡಿದೆ ಮತ್ತು ಐಐಟಿ-ಮದ್ರಾಸ್‌ನಲ್ಲಿ ಸುಧಾರಿತ ಉತ್ಪಾದನಾ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರದಂತಹ ಉತ್ಕೃಷ್ಟತೆಯ ಕೇಂದ್ರಗಳನ್ನು ಸ್ಥಾಪಿಸಲು ಉದ್ಯಮ ಮತ್ತು ಅಕಾಡೆಮಿಗಳೊಂದಿಗೆ ಪಾಲುದಾರಿಕೆ ಹೊಂದಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದರು.

ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿ- 2025 ಶೀಘ್ರ:

ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿ- 2025 ರೂಪಿಸಲು ನಮ್ಮ ಸಚಿವಾಲಯದ ಕೆಲಸ ಮಾಡುತ್ತಿದೆ. ಈ ವಲಯದಲ್ಲಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡುವತ್ತ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಬೇಗ ಈ ನೀತಿಯು ಹೊರಬರಲಿದೆ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿಯು ನಾವೀನ್ಯತೆಯನ್ನು ಉತ್ತೇಜಿಸಲು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ವ್ಯವಸ್ಥಿತವಾದ ಚೌಕಟ್ಟನ್ನು ಒದಗಿಸುತ್ತದೆ ಎಂದ ಹೆಚ್ ಡಿ ಕುಮಾರಸ್ವಾಮಿ,  ಈ ಪ್ರದರ್ಶನದಲ್ಲಿ 23 ದೇಶಗಳಿಂದ 1,100ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಂಡಿದ್ದಾರೆ. ಯಂತ್ರೋಪಕರಣ ಉದ್ಯಮಕ್ಕೆ ಇದು ಅತ್ಯುತ್ತಮ ವೇದಿಕೆ ಆಗಿದೆ ಎಂದರು.

ಮಳಿಗೆಗಳಿಗೆ ಭೇಟಿ ಕೊಟ್ಟ ಕೇಂದ್ರ ಸಚಿವರು:

ಪ್ರದರ್ಶನದಲ್ಲಿನ ಮಳಿಗೆಗಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಯತ್ರೋಪಕರಣ ಉದ್ಯಮದ ಆವಿಷ್ಕಾರ ಮತ್ತು ನಾವೀಣ್ಯತೆಯನ್ನು ಖುದ್ದು ವೀಕ್ಷಿಸಿದರು.

ಕೈಗಾರಿಕೆ ಉತ್ಪಾದನೆಗೆ ಬಹಳಷ್ಟು ಉತ್ತೇಜನ, ಶಕ್ತಿ ತುಂಬುವ ಈ ಕ್ಷೇತ್ರದಲ್ಲಿನ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ಸಂಬಂಧಪಟ್ಟ ಕಂಪನಿಗಳ ನಿಪುಣರಿಂದ ಕೇಂದ್ರ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ ಅವರು ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಚ್ ಎಂಟಿ ಮಳಿಗೆಗೆ ಭೇಟಿ ನೀಡಿದರು.

ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಸೇರಿ ಅನೇಕರು ಸಚಿವರ ಜತೆಯಲ್ಲಿ ಉಪಸ್ಥಿತರಿದ್ದರು.

Key words: Karnataka,  share, machinery industry, 50%,  Union Minister, HDK

The post ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50 : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ.

ಮೈಸೂರು, ಮಾ.13,2025: ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ಯಾತಮಾರನಹಳ್ಳಿಯ ಮಸೀದಿಗೆ ಬೀಗ...

തുഷാര്‍ ഗാന്ധിയെ തടഞ്ഞുവെച്ച സംഘപരിവാര്‍ പ്രവര്‍ത്തകരെ ആദരിച്ച് ബി.ജെ.പി

തിരുവനന്തപുരം: ആര്‍.എസ്.എസിനെ വിമര്‍ശിച്ചെന്ന് ആരോപിച്ച് മഹാത്മാഗാന്ധിയുടെ കൊച്ചുമകനും പ്രമുഖ ഗാന്ധിയനുമായ തുഷാര്‍...

`₹ குறியீடு கொண்ட கலைஞர் நினைவு நாணயங்களை வீசி எறிந்து விடுமா திமுக?' – அன்புமணி கேள்வி

தேசிய கல்விக் கொள்கையை அமல்படுத்துவதில் எழுந்த சர்ச்சையில், தமிழகத்தில் இந்தி எதிர்ப்பு அலை...

Green Card: గ్రీన్ కార్డ్ ఉన్నంత మాత్రాన “శాశ్వత నివాసం” కాదు: యూఎస్ వైస్ ప్రెసిడెంట్..

Green Card: డొనాల్డ్ ట్రంప్ అమెరికా అధ్యక్షుడైన తర్వాత అక్రమ వలసదారులపై...