16
Sunday
March, 2025

A News 365Times Venture

ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್

Date:

ಬೆಂಗಳೂರು, ಜನವರಿ,31,2025 (www.justkannada.in): ಫೇಸ್‌ಬುಕ್‌ ನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ವಂಚಿಸುತ್ತಿದ್ದ 7 ಆರೋಪಿಗಳನ್ನ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಮುದಾಸೀರ್, ಸೈಯ್ಯದ್ ಡ್ಯಾನಿಶ್, ಶಶಿಕುಮಾರ್, ಕಾಸೀಫ್, ಅಜರುದ್ದೀನ್, ಇಮ್ತಿಯಾಜ್ ಹಾಗೂ ಶಫಿವುಲ್ಲಾ ಷರೀಫ್  ಬಂಧಿತ ಆರೋಪಿಗಳು. ಆರೋಪಿಗಳನ್ನ ಮೈಸೂರಿನ ವಿವಿಧೆಡೆಗಳಲ್ಲಿ ಬಂಧಿಸಲಾಗಿದೆ.

ಬಂಧಿತ 7 ಆರೋಪಿಗಳು  ಮೊಹಮ್ಮದ್ ಕಾಶಿಫ್ ಎಂಬುವವರ ಸ್ನೇಹಿತನ ಹೆಸರಿನಲ್ಲಿ ಫೇಸ್‌ಬುಕ್‌  ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಗಳು 1.50 ಲಕ್ಷ ರೂ ಲಪಟಾಯಿಸಿದ್ದರು. ಈ ಕುರಿತು ಮೊಹಮ್ಮದ್ ಕಾಶಿಫ್ ದೂರು ನೀಡಿದ್ದರು.  ಇದೀಗ 7 ಆರೋಪಿಗಳನ್ನ ಬಂಧಿಸಲಾಗಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು, ಪ್ರಕರಣದ ತನಿಖೆ  ನಡೆಸಿದ ಪೊಲೀಸರು, ಹಣ ವರ್ಗಾವಣೆಯಾದ ಬ್ಯಾಂಕ್‌ ನ ಮಾಹಿತಿ ಕಲೆ ಹಾಕಿದಾಗ ಮೈಸೂರಿನಲ್ಲಿರುವ ಬ್ಯಾಂಕ್‌ ವೊಂದರ ಖಾತೆಗೆ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿತ್ತು. ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆತ ನೀಡಿದ ಮಾಹಿತಿ ಅನ್ವಯ ಉಳಿದ 6 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 9 ಮೊಬೈಲ್ ಫೋನ್‌ಗಳು, 11 ಬ್ಯಾಂಕ್ ಪಾಸ್‌ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್, 9 ಆಧಾರ್ ಕಾರ್ಡ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Key words: 7 accused,creating, fake accounts, Facebook, arrest

The post ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆ: ನಮಗೆ ಯಾವುದೇ ಮಾಹಿತಿ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,15,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ...

ചരിത്ര നേട്ടത്തോടെ എ.പി.എന്‍.ഡി 2025 കോണ്‍ഫറന്‍സിന് സമാപനം: അപൂര്‍വ രോഗങ്ങളള്‍ക്ക് ചികിത്സ അപൂര്‍വമാകില്ലെന്ന് മന്ത്രിയുടെ ഉറപ്പ്

തിരുവനന്തപുരം: ഇന്ത്യന്‍ അക്കാദമി ഓഫ് ന്യൂറോളജിയുടെ ഉപവിഭാഗമായ പീഡിയാട്രിക് ന്യൂറോളജി, ന്യൂറോമസ്‌കുലാര്‍...

'காஸாவிற்கு ஆதரவாக போராட்டம்… விசா ரத்து' – நாடு திரும்பிய இந்திய மாணவி; ட்ரம்ப் அரசின் கெடுபிடி!

"இனி அமெரிக்காவில் உள்ள கல்வி நிறுவனங்களில் படிக்கும் மாணவர்கள் யாரும் ...

Uttam Kumar Reddy : కాంగ్రెస్ పార్టీ ప్రభుత్వం సాధించిన విజయం ఇది

Uttam Kumar Reddy : కృష్ణా జలాలతో ఆంద్రప్రదేశ్ ప్రభుత్వం నిర్మించ...