16
Sunday
March, 2025

A News 365Times Venture

ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ: ಶ್ಲಾಘಿಸಿದ ಶಾಸಕ ಎಸ್.ಟಿ. ಸೋಮಶೇಖರ್

Date:

ಬೆಂಗಳೂರು,ಫೆಬ್ರವರಿ,7,2025 (www.justkannada.in): ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ.

ವಿಧಾನಸೌದದಲ್ಲಿ ಫೆಬ್ರವರಿ 6ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 , 6, 7ರಲ್ಲಿ ಆಂತರಿಕ ರಸ್ತೆಗಳ ಡಾಂಬರೀಕರಣವು ಬಹುತೇಕ ಪೂರ್ಣಗೊಂಡಿದೆ. ನಿವೇಶನದಾರರು ಮನೆ ನಿರ್ಮಾಣ ಮಾಡಲು ಮುಂದಾಗುತ್ತಿಲ್ಲ ಆದರೂ ಪ್ರಾಧಿಕಾರದಲ್ಲಿ ಉಳಿದ ಬ್ಲಾಕ್ ಗಳಲ್ಲಿ ಸುಮಾರು ಅಂದಾಜು ಮೊತ್ತ ರೂ 200. ಕೋಟಿಗೆ ಬಡಾವಣೆಯ ಆಂತರಿಕ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಮುಂದಾಗಿದೆ ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಬಡಾವಣೆಯ ನಿವೇಶನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಟ್ಟಡಗಳು ಬರಬೇಕೆಂದು ಹಾಗೂ ಕೆಂಪೇಗೌಡ ಬಡಾವಣೆಯು ನನ್ನ ಮತ ಕ್ಷೇತ್ರದಲ್ಲಿರುವ ಬಡಾವಣೆಯಾಗಿದ್ದು ಯಾವುದೇ ಕುಂದುಕೊರತೆಗಳಿದ್ದರೇ ಇಲಾಖೆಯವರಿಂದ ಪರಿಹರಿಸುವುದಾಗಿ ತಿಳಿಸಿದ ಶಾಸಕ ಎಸ್.ಟಿ. ಸೋಮಶೇಖರ್ ಅವರು

ಪ್ರಾಧಿಕಾರದವರು ಸಮಿತಿಯ ಸಭೆಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆಗಿರುವ ಪ್ರಗತಿಯ ವಿವರವನ್ನು ಮುಂದಿನ ಸಭೆಗೆ ಸಲ್ಲಿಸಿ, ಈ ಅರ್ಜಿಯನ್ನು ಅಂತಿಮಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರಲ್ಲಿ ಕೋರಿದರು.

ಒಟ್ಟಾರೆಯಾಗಿ ಬಡಾವಣೆಯ ಕೆಲಸ ಹಾಗೂ ಎಂ.ಎ.ಆರ್ ರಸ್ತೆಯ ಕೆಲಸದಲ್ಲಿ ಪ್ರಗತಿಯಾಗಿದೆಯೆಂದು ತಿಳಿಸಿದರು. ಈ ಮಧ್ಯೆ ಶಾಸಕರಾದ ಸುರೇಶ್ ಕುಮಾರ್ ರವರು ಮಾತನಾಡುತ್ತಾ, ಸದರಿ ಬಡಾವಣೆಯಲ್ಲಿ ರಸ್ತೆ ಅಗೆಯದಂತೆ, ಕುಡಿಯುವ ನೀರಿನ ಸಂಪರ್ಕಕ್ಕಾಗಿ ಪ್ರಾಧಿಕಾರವು ನಿವೇಶನದಾರರಿಂದ ಪಡೆಯುತ್ತಿರುವ ಮೊತ್ತವು ಅಧಿಕವಾಗಿದ್ದು, ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಶಾಸಕರಾದ ಯು.ಬಿ. ಬಣಕಾರ್, ಸಿ.ಎನ್.ಬಾಲಕೃಷ್ಣ, ಮಂಥರ್ ಗೌಡ, ಡಾ.ಅವಿನಾಶ್‌ ಜಾಧವ್, ಎಚ್.ಡಿ.ತಮ್ಮಯ್ಯ ಹಾಗೂ ಇತರರು ಇದ್ದರು.

Key words: Nadaprabhu Kempegowda, Layout, work, MLA S.T. Somashekar

The post ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ: ಶ್ಲಾಘಿಸಿದ ಶಾಸಕ ಎಸ್.ಟಿ. ಸೋಮಶೇಖರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯತೀಂದ್ರರ ಕಾಲಜ್ಞಾನ ಕೃತಿ ಸರ್ವಕಾಲಕ್ಕೂ ಪ್ರಸ್ತುತ: ಎಚ್.ಎ.ವೆಂಕಟೇಶ್

ಮೈಸೂರು,ಮಾರ್ಚ್,15,2025 (www.justkannada.in): ಯತೀಂದ್ರರವರು ರಚಿಸಿದ ಕಾಲಜ್ಞಾನದ ಕೃತಿಯಲ್ಲಿ ಎಲ್ಲಾ ಸಂದೇಶವು...

ഹോളി കളര്‍ ശരീരത്തിലാക്കാന്‍ സമ്മതിച്ചില്ല; യു.പിയില്‍ മുസ്‌ലിം യുവാവിനെ അടിച്ചുകൊന്ന് അക്രമികള്‍

ലഖ്നൗ: ഉത്തര്‍പ്രദേശില്‍ ഹോളി കളര്‍ ശരീരത്തിലാക്കാന്‍ വിസമ്മതിച്ചതിന് മുസ്‌ലിം യുവാവിനെ അടിച്ചുകൊന്ന്...

Chennai: ரூ.2,000 மாதக் கட்டணம்; ஏசி உள்ளிட்ட அனைத்து பேருந்துகளிலும் விருப்பம்போல பயணிக்கலாம்..!

இப்பேருந்துகள் மூலம் லட்சக்கணக்கான மக்கள் தினசரி பயணிக்கிறார்கள். அலுவலகம் செல்வோருக்கு வசதியாக...

Emergency Landing: శంషాబాద్ ఎయిర్‌పోర్టులో విమానం అత్యవసర ల్యాండింగ్..

శంషాబాద్ రాజీవ్ గాంధీ ఇంటర్నేషనల్ ఎయిర్‌పోర్టులో విమానం అత్యవసర ల్యాండింగ్ అయింది....