19
Wednesday
March, 2025

A News 365Times Venture

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

Date:

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿರುವ ಹೆಚ್.ಡಿಕುಮಾರಸ್ವಾಮಿ, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್ ಡಿಕೆ ತಿಳಿಸಿದ್ದಾರೆ.

Key words: Delhi Assembly, results, Union Minister, HDK

The post ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Jasprit Bumrah: గాయం నుండి పూర్తిగా కోలుకోని బుమ్రా.. ఐపీఎల్ 2025కు అందుబాటులో ఉంటాడా?

Jasprit Bumrah: భారతీయ క్రికెట్‌లో అత్యుత్తమ బౌలర్లలో ఒకరైన జస్ప్రీత్ బుమ్రా...

ಮಾ.22 ರಂದು ಕರ್ನಾಟಕ ಬಂದ್: ಸಂಚರಿಸಲಿವೆ ಸರ್ಕಾರಿ ಬಸ್ ಗಳು

ಬೆಂಗಳೂರು,ಮಾರ್ಚ್,19,2025 (www.justkannada.in): ಎಂಇಎಸ್ , ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ...

ആരോഗ്യമന്ത്രിയുമായുള്ള ചര്‍ച്ച വീണ്ടും പരാജയം; ആശാ പ്രവര്‍ത്തകര്‍ നിരാഹാര സമരത്തിലേക്ക്

തിരുവനന്തപുരം: സംസ്ഥാന ആരോഗ്യമന്ത്രി വീണ ജോര്‍ജുമായി ആശാ പ്രവര്‍ത്തകരുടെ നേതൃത്വം നടത്തിയ...

Miss World Pageant: `தெலங்கானா இருக்கும் நிலைக்கு இது அவசியமா?" – மாநில அரசை சாடும் KTR

தெலங்கானா சட்டமன்றத்தில் நேற்று பட்ஜெட் தாக்கல் செய்யப்பட்டது. அப்போது மாநிலத்தில்...