18
Tuesday
March, 2025

A News 365Times Venture

ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Date:

ಮೈಸೂರು,ಮಾರ್ಚ್,15,2025 (www.justkannada.in): ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ(ಸ್ವಾಯತ್ತ) ನಡೆದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಇಂದು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಒಟ್ಟು 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 406 ಪದವೀಧರರು ಮತ್ತು 183 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಇವರಲ್ಲಿ 45 ಪ್ರತಿಭಾವಂತ ವಿದ್ಯಾರ್ಥಿಗಳು, 34 ಪದವೀಧರರು ಮತ್ತು 11 ಸ್ನಾತಕೋತ್ತರ ವಿದ್ಯಾರ್ಥಿಗಳು, ಶ್ರೇಷ್ಠ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕಗಳನ್ನು ಸ್ವೀಕರಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ  ಡಾ. ಬರ್ನಾಡ್ ಮೊರಾಸ್ ಆಗಮಿಸಿದ್ದರು.   ಚಂಡೀಗಢ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಮನ್‌ಪ್ರೀತ್ ಸಿಂಗ್ ಮನ್ನಾ ಪದವಿ ಪ್ರದಾನ ಭಾಷಣ ಮಾಡಿದರು.

ಹಾಗೆಯೇ  ಅತಿಥಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ  ಪ್ರೊ. ಎನ್.ಕೆ. ಲೋಕನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಆಡ್ ಜಾನ್ ಮೆಂಡೋನ್ಸಾ ಧರ್ಮಪ್ರಾಂತ್ಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಫಾದರ್ ಎಡ್ವರ್ಡ್ ವಿಲಿಯಮ್ ಸಾಲ್ಡಾನ್ಹಾ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ಗುರುಗಳಾದ ಡಾ. ಲೂರ್ದ್ ಪ್ರಸಾದ್, ರೆಕ್ಟರ್, ಜ್ಞಾನ ಪ್ರಗಾಸಂ,  ಡೇವಿಡ್ ಸಾಗಯರಾಜ್ ಎಸ್ ಮತ್ತಿತರರು ಉಪಸ್ಥಿತರಿದ್ದರು.

Key words: St. Philomena’s College, 11th Convocation

The post ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ വ്യോമാക്രമണം പുനരാരംഭിച്ച് ഇസ്രഈല്‍; 100ലേറെ മരണം

ഗസ: ഒരിടവേളയ്ക്ക് ശേഷം ഗസയില്‍ വീണ്ടും ആക്രമണം പുനരാരംഭിച്ച് ഇസ്രഈല്‍. വെടിനിര്‍ത്തല്‍...

மோடியின் நேர்காணலில் ட்ரம்ப் குறித்த பேச்சு… வீடியோவை பகிர்ந்த ட்ரம்ப்; நன்றி பாராட்டிய மோடி

இந்திய பிரதமர் மோடியிடம் நேர்காணல் செய்த லெக்ஸ் ஃப்ரிட்மேன் பாட்காஸ்டை நிகழ்ச்சியை...

Gold Rates Today: అమ్మబాబోయ్.. మళ్లీ భారీగా పెరిగిన బంగారం ధరలు.. నేడు తులం ఎంతంటే?

నిన్నటి వరకు తగ్గుతూ వచ్చిన బంగారం ధరలు నేడు షాకిచ్చాయి. ఈ...

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,17,2025 (www.justkannada.in): ಬಿವೈ ವಿಜಯೇಂದ್ರ ನಾಡಗೀತೆ ಓದಲಿ ಎಂದಿದ್ದ ಡಿಸಿಎಂ...