23
Sunday
March, 2025

A News 365Times Venture

ಹೃದಯಾಘಾತ, ಪಾರ್ಶ್ವವಾಯು ಚಿಕಿತ್ಸೆ ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಸೇರಿಸಿ:  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ.

Date:

ನವದೆಹಲಿ, ಮಾ.19, 2025 : ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ,  ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರು.

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ. ದುರದೃಷ್ಟವಶಾತ್ ಶೇ.30ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕು. ಇದರಿಂದ ಗೋಲ್ಡನ್. ಹವರ್ ನಲ್ಲಿಯೇ,( ಆರು ಗಂಟೆಗಳ ಒಳಗಾಗಿ)  ಜೀವಗಳನ್ನು ಉಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಪ್ರಧಾನಿ ಒತ್ತಾಯಿಸಿದರು. ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ 37,000 ಕೋಟಿ ರೂ. ಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ 99,058 ಕೋಟಿ ರೂ.ಗಳಿಗೆ ಏರಿದೆ ಎಂದು ಹೆಚ್.ಡಿ. ದೇವೇಗೌಡ ಹೇಳಿದರು.

key words:  heart attack, stroke treatment, Ayushman Bharat, Former Prime Minister H.D. Devegowda.

summary:

Add heart attack, stroke treatment to Ayushman Bharat coverage: Former Prime Minister H.D. Devegowda.

The post ಹೃದಯಾಘಾತ, ಪಾರ್ಶ್ವವಾಯು ಚಿಕಿತ್ಸೆ ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಸೇರಿಸಿ:  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ : ಹಲವೆಡೆ ಹೋರಾಟ, ಪ್ರತಿಭಟನೆ

ಬೆಂಗಳೂರು, ಮಾರ್ಚ್ 22,2025 (www.justkannada.in):  ಎಂಇಎಸ್ ಸಂಘಟನೆ ನಿಷೇಧ ಹಾಗೂ...

സവര്‍ക്കര്‍ മഹാനാണെന്ന് ആരെങ്കിലും പറഞ്ഞിട്ടുണ്ടെങ്കില്‍ എനിക്കാഭിപ്രായമില്ല; ഗവര്‍ണറെ തള്ളി എം.വി. ഗോവിന്ദന്‍

തിരുവനന്തപുരം: ഗവര്‍ണര്‍ രാജേന്ദ്ര ആര്‍ലേക്കറുടെ സവര്‍ക്കര്‍ പരാമര്‍ശത്തെ തള്ളി സി.പി.ഐ.എം സംസ്ഥാന...

Tax: “உங்கள் வாதமே தவறானது; திசை திருப்பாதீர்கள்..'' – திமுகவுக்கு நிர்மலா சீதாராமன் பதிலடி

சென்னையில் நடந்த மத்திய பட்ஜெட் தொடர்பான ஆலோசனை கூட்டத்தில் பேசிய நிர்மலா...

America: కసాయి తల్లి.. కొడుకు గొంతు కోసి చంపిన భారత సంతతికి చెందిన మహిళ

అమెరికాలో దారుణం చోటుచేసుకుంది. కాలిఫోర్నియాలోని శాంటా అనాలో భారత సంతతికి చెందిన...
08:47