26
Wednesday
March, 2025

A News 365Times Venture

ಮೈಸೂರಿನಲ್ಲಿ ವಿಶ್ವ ಗುಬ್ಬಚ್ಚಿ ದಿನಾಚರಣೆ

Date:

ಮೈಸೂರು ,ಮಾರ್ಚ್,20,2025 (www.justkannada.in): ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಮಾಡಲಾಯಿತು.

ನಗರದ ಮಹಾರಾಜ ಮೈದಾನದ ಮುಂಭಾಗ  ಆಯೋಜಿಸಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ನಟ ಆದಿ ಲೋಕೇಶ್ ಚಾಲನೆ ಕೊಟ್ಟರು.

ಇದೇ ವೇಳೆ ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ, ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ, ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ ಎಂಬ ಘೋಷವಾಕ್ಯ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ  ವನ್ಯಜೀವಿ ಮಂಡಳಿಯ ರಾಜ್ಯ ಸದಸ್ಯಡಾ. ಸಂತೃಪ್ತಿ ಗೌಡ, ಕೆ ಆರ್ ವಿಭಾಗದ ಉಪ ಪೊಲೀಸ್ ಆಯುಕ್ತ ರಮೇಶ್ ಕುಮಾರ್, ಉರುಗ ತಜ್ಞ ಸ್ನೇಕ್ ಶ್ಯಾಮ್, ಸೌಮ್ಯ ಆದಿ ಲೋಕೇಶ್, ಕಿರುತರೆ ನಟ ಮಹೇಂದರ್, ಎನ್ ಎಂ ನವೀನ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವೈದ್ಯ ಶ್ರೀನಿವಾಸ್ ಆಚಾರ್, ಶ್ರೀನಿವಾಸ್ ಭಾಷ್ಯಂ,  ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಎಸ್ ಎನ್ ರಾಜೇಶ್, ಚಕ್ರಪಾಣಿ, ಸುಚೇಂದ್ರ, ಮಹಾನ್ ಶ್ರೇಯಸ್, ಮಿರ್ಲೆ ಪನಿಷ್, ರಾಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Key words: World Sparrow Day, celebrated, Mysore

The post ಮೈಸೂರಿನಲ್ಲಿ ವಿಶ್ವ ಗುಬ್ಬಚ್ಚಿ ದಿನಾಚರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`மாநகராட்சியாக மாறும் புதுச்சேரி நகராட்சிகள்!' – முதல்வர் ரங்கசாமி அறிவிப்பு

புதுச்சேரி சட்டப்பேரவையில் 2025-2026 நிதியாண்டுக்கான பட்ஜெட் மார்ச் 12-ம் தேதி தாக்கல்...

Minister Nimmala Ramanaidu: చంద్రబాబు 18 నెలలు కష్టపడి డయాఫ్రమ్ వాల్ నిర్మిస్తే.. జగన్ విధ్వంసం చేశాడు

ముఖ్యమంత్రి చంద్రబాబు రేపు పోలవరం ప్రాజెక్ట్ పనులను పరిశీలించనున్నారు. చంద్రబాబు పర్యటన...

ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ

ಮಂಡ್ಯ,ಮಾರ್ಚ್,26,2025 (www.justkannada.in):  ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಸದ್ದು ಮಾಡುತ್ತಿರುವ ನಡುವೆಯೇ...