22
Tuesday
April, 2025

A News 365Times Venture

ಶಾಸಕ ಎ.ಎಸ್ ಪೊನ್ನಣ್ಣ ಸೇರಿ ಮೂವರನ್ನ ಬಂಧಿಸಿ- ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹ

Date:

ಕೊಡಗು,ಏಪ್ರಿಲ್,4,2025 (www.justkannada.in): ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದರು.

ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಕೆ.ಜಿ ಬೋಪಯ್ಯ,  ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ.  ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು.  ವಿನಯ್ ಬಂಧನಕ್ಕೂ ಪೊಲೀಸರು ಮುಂದಾಗಿದ್ದರು ವಿನಯ್ ವಿರುದ್ದ  ಎಫ್ ಐಆರ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.  ವಿನಯ್ ಗೆ  ಧೈರ್ಯ ಹೇಳಿದರೂ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು

ವಿನಯ್ ಆತ್ಮಹತ್ಯೆಗೆ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಕಾರಣ. ಮೂವರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೆಜಿ ಬೋಪಯ್ಯ ಒತ್ತಾಯಿಸಿದರು. ಅಲ್ಲದೆ ಕಾಂಗ್ರೆಸ್ ದುರಾಡಳಿತದ ವಿರುದ್ದ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

Key words: MLA, Ponnanna, Three arrest, former speaker, KG Bopaiah

The post ಶಾಸಕ ಎ.ಎಸ್ ಪೊನ್ನಣ್ಣ ಸೇರಿ ಮೂವರನ್ನ ಬಂಧಿಸಿ- ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊರಗಡೆ ಬಾ ನೋಡ್ಕೊತೀನಿ : ದೆಹಲಿ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಅಪರಾಧಿ, ವಕೀಲ.!

ನವ ದೆಹಲಿ, ಏ.೨೧,೨೦೨೫: ದೆಹಲಿಯ ದ್ವಾರಕಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್...

പശുവിനെ ഇടിച്ചാൽ പോലും അപകടത്തിൽപ്പെടാൻ സാധ്യത; വന്ദേഭാരതിന് സുരക്ഷാവീഴ്ചയെന്ന് റെയിൽവേ സേഫ്റ്റി കമീഷണർ

ന്യൂദൽഹി: രാജ്യത്തെ സൂപ്പര്‍ വി.ഐ.പി ട്രെയിനുകളായ വന്ദേഭാരത് ട്രെയിനുകള്‍ ഗുരുതരമായ അപകട...

ஸ்ரீவில்லிபுத்தூர்: “லஞ்சம் கொடுத்தால் மட்டுமே வேலை நடக்கும்..'' – CPIM பேனரால் பரபரப்பு

விருதுநகர் மாவட்டம் ஸ்ரீவில்லிபுத்தூர் அருகே மல்லி கிராமம் நாகபாளையத்தில், குருசாமி என்பவரின்...

Godavari Delta: 3 ప్రధాన కాలువలకు సాగునీటి సరఫరా నిలిపివేత.. మళ్లీ జూన్ ఒకటి నుంచి నీరు విడుదల!

తూర్పుగోదావరి జిల్లా గోదావరి డెల్టా పరిధిలోని మూడు ప్రధాన కాలువలకు ఈరోజు...