14
Friday
March, 2025

A News 365Times Venture

ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳ ವಿರುದ್ಧ ಚಾಲಕ ಸಂಘಟನೆಗಳ ವಿನೂತನ ಪ್ರತಿಭಟನೆ

Date:

ಬೆಂಗಳೂರು, ಜನವರಿ,25,2025 (www.justkannada.in):  ಅನಧಿಕೃತವಾಗಿ ನಡೆಯುತ್ತಿರುವ ರಾಪಿಡೋ, ಓಲಾ, ಉಬರ್, ಹಾಗೂ ಗೂಡ್ಸ್  ಪೋರ್ಟರ್ ನಂತಹ  ಆನ್ಲೈನ್ ಸಂಸ್ಥೆಗಳು ವಿರುದ್ಧ ಹಾಗೂ ಇಂತಹ ಕಾನೂನುಬಾಹಿರ ಸಂಸ್ಥೆಗಳನ್ನು ಪೋಷಿಸುತ್ತಿರುವ ಸಾರಿಗೆ ಅಧಿಕಾರಿಗಳ ಧೋರಣೆ ಖಂಡಿಸಿ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ ಪ್ರತಿನಿಧಿಗಳು ಫ್ರೀಡಂ ಪಾರ್ಕ್ ನ ಭಗತ್ ಸಿಂಗ್ ಪ್ರತಿಮೆ ಎದುರು ಖಾಲಿ ತಪ್ಪಲೆ, ತಟ್ಟೆಗಳನ್ನು ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.

ಚಾಲಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಚಾಲಕರು ಖಾಲಿ ಪಾತ್ರೆ ಸಾಮಾನುಗಳನ್ನು ಬಡಿದು, ಕಪ್ಪು ಪಟ್ಟಿ ಧರಿಸಿ ಘೋಷಣೆ ಕೂಗಿದರು. ಕಾನೂನು ಬಾಹಿರ ಸಾಗಾಣೆ ವಾಹನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇವು ಸರ್ಕಾರದಿಂದ ನಿಯಮಾನುಸಾರ ಅನುಮತಿ ಪಡೆದಿಲ್ಲ. ಇದರಿಂದ ಖಾಸಗಿ ವಾಹನ ಚಾಲಕರ ದುಡಿಮೆಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಪದೇ ಪದೇ ಮಾಡಿದ ಮನವಿಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಸಾರಿಗೆ ಅಧಿಕಾರಿಗಳೇ ಇಂತಹ ಕಾನೂನು ಬಾಹಿರ ಸಂಸ್ಥೆಗಳ ಪೋಷಕರಾಗಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಮಾಡಿದ್ದೇವೆ. ಸರ್ಕಾರದ ಧೋರಣೆಯಿಂದ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ತಾರತಮ್ಯ ಮಾಡುತ್ತಿರುವ ಓಲಾ, ಉಬರ್ ಗೆ ಕೇಂದ್ರ ಸರ್ಕಾರ ಈಗಾಗಲೇ ನೋಟಿಸ್ ನೀಡಿ ಸ್ಪಷ್ಟನೆ ಕೇಳಿದೆ. ಚಾಲಕರ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೂ ಕೂಡ ನೇರ ಹೊಣೆ. ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜುಕನ್ನಡಿಗ ಮಾತನಾಡಿ, ಸರ್ಕಾರದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕ್ಷುಲ್ಲಕ  ಕಾರಣಗಳನ್ನು ನೀಡಿ ಚಾಲಕರಿಗೆ ಅನ್ಯಾಯ ಎಸಗುತ್ತಿದ್ದಾರೆ.  ಇಂತಹ ಕಾನೂನು ಬಾಹಿರ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಉನ್ನತಮಟ್ಟದ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Key words: Driver organizations, protest, against, Rapido, Ola, Uber, Goods portals

The post ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳ ವಿರುದ್ಧ ಚಾಲಕ ಸಂಘಟನೆಗಳ ವಿನೂತನ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Off The Record : పాలకుర్తి కాంగ్రెస్‌లో రచ్చకు కారణం వాళ్లేనా..?

పాలకుర్తి కాంగ్రెస్‌లో రచ్చకు కారణం ఎవరు? సొంత పార్టీ నేతలేనా? లేక...

‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ...

എച്ചില്‍ ഇലയില്‍ ശയനപ്രദക്ഷിണം വേണ്ട; മനുഷ്യന്റെ ആരോഗ്യത്തിനും അന്തസിനും ഹാനികരം; മദ്രാസ് ഹൈക്കോടതി

ചെന്നൈ: തമിഴ്‌നാട്ടില്‍ എച്ചിലിലയില്‍ ശയനപ്രദക്ഷിണം വേണ്ടെന്ന് മദ്രാസ് ഹൈക്കോടതി. കരൂരിലെ ക്ഷേത്രത്തില്‍...

TASMAC: "டாஸ்மாக்கில் ரூ. 1,000 கோடி ஊழல்" – குற்றச்சாட்டுகளை அடுக்கும் அமலாக்கத்துறை; பின்னணி என்ன?

அமலாக்கத்துறை அதிகாரிகள் மார்ச் 6-ம் தேதி எழும்பூரில் டாஸ்மாக் தலைமை அலுவலகம்,...