3
Monday
March, 2025

A News 365Times Venture

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ : ಸರಕಾರದ ವಿರುದ್ಧ ಆರ್. ಅಶೋಕ್‌ ಆಕ್ರೋಶ.

Date:

 

ಬೆಂಗಳೂರು, ಜ.೩೧, ೨೦೨೫ : ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೂಲಕ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ ಅಂತ್ಯಗೊಳಿಸುವ ಮೂಲಕ ಹಿಟ್ಲರ್ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಆಕ್ರೋಶ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು ಹೇಳಿದಿಷ್ಟು..

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಚುನಾವಣೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟ ಆಶ್ವಾಸನೆ ಈಡೇರಿಸುವುದಕ್ಕಂತೂ ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ನಾಲ್ಕು ದಿನದಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರನ್ನ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ?

ತಮ್ಮ ನಾಯಕ ರಾಹುಲ್‌ ಗಾಂಧಿ ಅವರು ಹೋಗಿಬಂದಲ್ಲೆಲ್ಲ ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಸಾಮಾನ್ಯ ನಾಗರಿಕರಿಗೆ ಪ್ರತಿಭಟನೆ ಮಾಡುವ ಹಕ್ಕಿಲ್ವಾ? ಅಥವಾ ನಮ್ಮ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಏನಾದರೂ ಇದೆಯಾ?

ನಿಮ್ಮ ಈ ಹಿಟ್ಲರ್ ಧೋರಣೆ ಜಾಸ್ತಿ ದಿನ ನಡೆಯುವುದಿಲ್ಲ. ನಿಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ತಿರುಗಿ ಬೀಳುವ ದಿನ ಬಹಳ ದೂರವಿಲ್ಲ.

key words: Police obstruct, Anganwadi workers’, protest, R. Ashok’s anger.

The post ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ : ಸರಕಾರದ ವಿರುದ್ಧ ಆರ್. ಅಶೋಕ್‌ ಆಕ್ರೋಶ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Malkpet: అనుమానాస్పద స్థితిలో వివాహిత మృతి.. భర్తే కొట్టి చంపాడని ఫిర్యాదు

ఆమె అనాధ.. తల్లిదండ్రులు చనిపోయారు.. ముగ్గురు అక్క చెల్లెలు.. వీళ్లు ముగ్గురు...

ರಾಜ್ಯ ಅಭಿವೃದ್ದಿಯಾಗಿಲ್ಲ, ಕೇವಲ ಕಾಂಗ್ರೆಸ್ ಅಭಿವೃದ್ಧಿಯಾಗಿದೆ- ಆರ್.ಅಶೋಕ್ ಕಿಡಿ

ಬೆಂಗಳೂರು,ಮಾರ್ಚ್,3,2025 (www.justkannada.in):  ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ ಕೇವಲ ಕಾಂಗ್ರೆಸ್ ಮಾತ್ರ ಅಭಿವೃದ್ಧಿಯಾಗಿದೆ...

ഇറാന്‍ വൈസ് പ്രസിഡന്റ് മുഹമ്മദ് ജവാദ് സരീഫ് രാജിവെച്ചു

ടെഹ്‌റാന്‍: ധനമന്ത്രിക്ക് പിന്നാലെ ഇറാനിയന്‍ വൈസ് പ്രസിഡന്റ് മുഹമ്മദ് ജവാദ് സരീഫ്...

திருப்பத்தூர்: பணிகள் நிறைவடைந்தும் திறக்கப்படாத ரயில்வே மேம்பாலம் – சிரமத்தில் மக்கள்!

நாட்றம்பள்ளி- திருப்பத்தூரை இணைக்கும் நெடுஞ்சாலையில் நாள்தோறும் ஆயிரக்கணக்கான வாகனங்கள் சென்று வருகின்றன....