15
Saturday
March, 2025

A News 365Times Venture

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಶಿಷ್ಟಾಚಾರ ಉಲ್ಲಂಘನೆ ಕುರಿತು ತನಿಖೆಗೆ ಸರ್ಕಾರ ಆದೇಶ

Date:

ಬೆಂಗಳೂರು, ಮಾರ್ಚ್ 11,2025 (www.justkannada.in): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್  ಪ್ರಕರಣ ಸಂಬಂಧ ಶಿಷ್ಟಾಚಾರ ಉಲ್ಲಂಘನೆ ಕುರಿತು ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ಪ್ರಕರಣ ಸಂಬಂಧ ಇದೀಗ  ರನ್ಯಾರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ.

ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸುವಂತೆ ಗೃಹ ಇಲಾಖೆ ಸೂಚಿಸಿದೆ.

ನಟಿ ರನ್ಯಾ ಚಿನ್ನ ಸಾಗಾಣೆ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವೇನು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.

Key words:  Ranya Rao, gold smuggling case, Government

The post ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಶಿಷ್ಟಾಚಾರ ಉಲ್ಲಂಘನೆ ಕುರಿತು ತನಿಖೆಗೆ ಸರ್ಕಾರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

  ಬೆಂಗಳೂರು, ಮಾರ್ಚ್ 13,2025:  ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು...

വാഹനാപകടത്തില്‍ വ്‌ളോഗര്‍ ജുനൈദ് മരിച്ചു

മലപ്പുറം: തൃക്കലങ്ങോട് മരത്താണിയില്‍ ബൈക്ക് മറിഞ്ഞ് വ്‌ളോഗര്‍ ജുനൈദ് (32)മരിച്ചു. റോഡരികിലെ...

'Senthil Balaji-க்கு, இனி ஒவ்வொரு நிமிடமும் ஷாக்தான்' – நெருக்கும் ED | Elangovan Explains

இளங்கோவன் எக்ஸ்பிளைன்சில்,டாஸ்மாக் துறையில் ரூ 1000/- கோடி ரூபாய்க்கு மேல் முறைகேடு...

Top Headlines @9PM : టాప్‌ న్యూస్‌

పవన్ అన్న అంటూ లోకేష్ ట్వీట్.. మంత్రి స్పెషల్ విషెస్ జనసేన 12వ...