22
Saturday
March, 2025

A News 365Times Venture

ಮಲ್ಪೆಯಲ್ಲಿ‌  ಮೀನು ಕಳ್ಳತನ : ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ.

Date:

ಬೆಂಗಳೂರು, ಮಾ.19, 2025: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ  ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

key words: Fish theft,  Malpe, CM,assaulted woman.udupi, police

summary: 

Fish theft in Malpe: CM orders action against those who assaulted woman.

Chief Minister Siddaramaiah has instructed the police to conduct a proper investigation and take necessary action regarding the incident in which a woman was tied to a tree and brutally hanged on suspicion of stealing fish in Malpe, Udupi district.

The post ಮಲ್ಪೆಯಲ್ಲಿ‌  ಮೀನು ಕಳ್ಳತನ : ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.12 ರಂದು ಮೈಸೂರಿನಲ್ಲಿ ‘ಆರೋಗ್ಯಕ್ಕಾಗಿ ನಡಿಗೆ’ ಮತ್ತು ಉಚಿತ ಆರೋಗ್ಯ ತಪಾಸಣೆ

ಮೈಸೂರು,ಮಾರ್ಚ್,20,2025 (www.justkannada.in):  ಮೈಸೂರಿನ ಪ್ರತಿಷ್ಠಿತ ‘ಮೈಸೂರ್ ವೆಸ್ಟ್ ಲಯನ್ಸ್ ಕ್ಲಬ್...

നെതന്യാഹുവിന് തിരിച്ചടി; ഷിന്‍ ബെറ്റ് മേധാവിയെ പുറത്താക്കിയ ഉത്തരവ് സുപ്രീം കോടതി മരവിപ്പിച്ചു

ടെല്‍ അവീവ്: ഇസ്രഈല്‍ ആഭ്യന്തര സുരക്ഷ ഏജന്‍സിയായ ഷിന്‍ ബെറ്റ് മേധാവി റോണന്‍...

Srisailam Project: శ్రీశైలం జలాశయంలో వేగంగా పడిపోయిన నీటిమట్టం.. డెడ్ స్టోరేజీకి చేరువగా..!

Srisailam Project: శ్రీశైలం జలాశయంలో ఒకవైపు నీటిమట్టం వేగంగా పడిపోతుంది. ఎడమగట్టు...