26
Wednesday
March, 2025

A News 365Times Venture

ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ

Date:

ಮೈಸೂರು,ಮಾರ್ಚ್,23,2025 (www.justkannada.in):  ಮೈಸೂರಿನಲ್ಲಿ  ತಾಪಮಾನ ಏರಿಕೆ ಹಿನ್ನಲೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ. ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದರು.

ಈ ಕುರಿತು ಮಾತನಾಡಿದ ಡಿಎಚ್ ಒ ಕುಮಾರಸ್ವಾಮಿ,  ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ. ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ದೇಹ ನಿರ್ಜಲೀಕರಣ  ಮನೆಯಲ್ಲೇ ಓಆರ್ಎಸ್ ದ್ರಾವಣ ಹೇಗೆ  ತಯಾರಿಸಬೇಕು ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದರು.

ಸಾಧ್ಯವಾದಷ್ಟು ನೀರು,ತಂಪು ಪಾನೀಯಗಳ ಸೇವಿಸಬೇಕು,ಮಾಂಸಹಾರ ಕಡಿಮೆ ಮಾಡಿ, ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ  ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ ಕೈಪಿಡಿಗಳು,ಪೋಸ್ಟರ್ ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದರು.

Key words: Temperatures rise , Mysore, DHO, Dr. Kumaraswamy

The post ಮೈಸೂರಿನಲ್ಲಿ ತಾಪಮಾನ ಏರಿಕೆ: ಹೆಚ್ಚು ಬಿಸಿಲಿನ ವೇಳೆ ಅನಗತ್ಯ ಓಡಾಟ ಕಡಿಮೆ ಮಾಡಿ-ಡಿಎಚ್ ಒ ಡಾ.ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್

ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ...

ഇ.ഡി ബി.ജെ.പിയുടെ വാലായി മാറി, കേസ് അട്ടിമറിക്കാന്‍ ശ്രമിക്കുന്നു: എം.വി ഗോവിന്ദന്‍

കൊച്ചി: കേസ് എങ്ങനെ ശാസ്ത്രീയമായി ഇല്ലാതാക്കാമെന്നതിന്റെ തെളിവാണ് കൊടകര കുഴല്‍പണ കേസിലെ...

`மாநகராட்சியாக மாறும் புதுச்சேரி நகராட்சிகள்!' – முதல்வர் ரங்கசாமி அறிவிப்பு

புதுச்சேரி சட்டப்பேரவையில் 2025-2026 நிதியாண்டுக்கான பட்ஜெட் மார்ச் 12-ம் தேதி தாக்கல்...

Minister Nimmala Ramanaidu: చంద్రబాబు 18 నెలలు కష్టపడి డయాఫ్రమ్ వాల్ నిర్మిస్తే.. జగన్ విధ్వంసం చేశాడు

ముఖ్యమంత్రి చంద్రబాబు రేపు పోలవరం ప్రాజెక్ట్ పనులను పరిశీలించనున్నారు. చంద్రబాబు పర్యటన...