28
Friday
March, 2025

A News 365Times Venture

ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ.

Date:

ಮೈಸೂರು,ಮಾರ್ಚ್,24,2025 (www.justkannada.in): ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕಿಡಿಗೇಡಿಗಳ ಈ ಕೃತ್ಯ ಮನಕಲಕುವಂತಿದ್ದು, ಇದೀಗ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದ ಜಮೀನಿನಲ್ಲಿ  ಹಸು ಮೇವು ಮೇಯುತಿದ್ದಾಗ ಘಟನೆ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು ಇದಾಗಿದೆ. ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ಮಧ್ಯೆ ಕಿಡಿಗೇಡಿಗಳು ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದರು. ಈ ನಡುವೆ ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸರು, ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Mysore,  Firecrackers,  explode, cow, mouth.

The post ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲುಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ, ಮಾರ್ಚ್,26,2025 (www.justkannada.in):  ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ...

ജമ്മു കാശ്മീർ; ലൈലത്തുൽ ഖദർ ദിനത്തിൽ ഔഖാഫ് ജുമാ മസ്ജിദിൽ നമസ്‌കാരം നിരോധിച്ച നടപടിയെ അപലപിച്ച് മിർവായിസ്

ശ്രീനഗർ: പഴയ ശ്രീനഗർ നഗരത്തിലെ ചരിത്രപ്രസിദ്ധമായ ഔഖാഫ് ജുമാ മസ്ജിദിൽ ഷബ്-ഇ-ഖദ്ർ...

சுஷாந்த் சிங் செயலாளர் திஷா தற்கொலையில் ஆதித்ய தாக்கரேவுக்குத் தொடர்பு? ஷிண்டே அணி சொல்வது என்ன?

தற்கொலை செய்து கொண்ட பாலிவுட் நடிகர் சுஷாந்த் சிங் ரஜபுத்திடம் செயலாளராக...

Telangana Assembly : తెలంగాణ అసెంబ్లీ నిరవధిక వాయిదా

Telangana Assembly : తెలంగాణ అసెంబ్లీ (Telangana Assembly) సమావేశాలు గురువారం...