28
Friday
March, 2025

A News 365Times Venture

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಸಭಾಪತಿ ಬಸವರಾಜ ಹೊರಟ್ಟಿ

Date:

ಹುಬ್ಬಳ್ಳಿ,ಮಾರ್ಚ್, 25,2025 (www.justkannada.in): ಇತ್ತೀಚಿನ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಅಸಮಾಧಾನ ಹೊರಹಾಕಿದ್ದ ಸಭಾಪತಿ ಬಸವರಾಜ ಹೊರಟ್ಟಿ,  ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ  ಇಂದು ಮಾತನಾಡಿರುವ ಬಸವರಾಜ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ರಾಜೀನಾಮೆ ನಿರ್ಧಾರವನ್ನ  ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಜೊತೆಗೆ ಗವರ್ನರ್, ಸಚಿವರು, ಶಾಸಕರು ಇದ್ದಾರೆ. ಮಾರ್ಚ್.27ರಂದು ಕುಳಿತು ಚರ್ಚಿಸೋಣ. ಅಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ  ಎಂದು ತಿಳಿಸಿದರು.

ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವಂತ ರಾಜೀನಾಮೆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ರಾಜೀನಾಮೆ ಪತ್ರದಲ್ಲಿ ಸಹಿ ಇರಲಿಲ್ಲ. ವೈರಲ್ ಪತ್ರಕ್ಕೆ ನಾನು ಸಹಿ ಮಾಡಿಲ್ಲ. ಹದಗೆಟ್ಟ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುವೆ. ಎಲ್ಲರೂ ನೀವು ರಾಜೀನಾಮೆ ಕೊಡಬೇಡಿ ಎಂದಿದ್ದಾರೆ ಎಂದರು.

Key words: Basavaraj Horatti, backs down, resignation, decision

The post ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಸಭಾಪತಿ ಬಸವರಾಜ ಹೊರಟ್ಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿ.ಎಸ್.ಎಫ್ ಕ್ಯಾಂಪಸ್ ನಲ್ಲಿ ಸಾಲುಮರದ ತಿಮ್ಮಕ್ಕ ವನ: 8.500 ಗಿಡ ನೆಡುವ ಅಭಿಯಾನ

ಬೆಂಗಳೂರು ಗ್ರಾಮಾಂತರ, ಮಾರ್ಚ್,26,2025 (www.justkannada.in):  ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ...

ജമ്മു കാശ്മീർ; ലൈലത്തുൽ ഖദർ ദിനത്തിൽ ഔഖാഫ് ജുമാ മസ്ജിദിൽ നമസ്‌കാരം നിരോധിച്ച നടപടിയെ അപലപിച്ച് മിർവായിസ്

ശ്രീനഗർ: പഴയ ശ്രീനഗർ നഗരത്തിലെ ചരിത്രപ്രസിദ്ധമായ ഔഖാഫ് ജുമാ മസ്ജിദിൽ ഷബ്-ഇ-ഖദ്ർ...

சுஷாந்த் சிங் செயலாளர் திஷா தற்கொலையில் ஆதித்ய தாக்கரேவுக்குத் தொடர்பு? ஷிண்டே அணி சொல்வது என்ன?

தற்கொலை செய்து கொண்ட பாலிவுட் நடிகர் சுஷாந்த் சிங் ரஜபுத்திடம் செயலாளராக...

Telangana Assembly : తెలంగాణ అసెంబ్లీ నిరవధిక వాయిదా

Telangana Assembly : తెలంగాణ అసెంబ్లీ (Telangana Assembly) సమావేశాలు గురువారం...