26
Saturday
April, 2025

A News 365Times Venture

ಪಿಯು ಫಲಿತಾಂಶ : ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ಮೂರರಲ್ಲೂ ಹೆಣ್ಮಕ್ಕಳೇ ಟಾಪರ್ಸ್..!‌

Date:

ಬೆಂಗಳೂರು, ಏ.೦೮,೨೦೨೫ : ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಹೆಣ್ಮಕ್ಕಳೆ ಟಾಪರ್ಸ್‌ .  ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ಮೇಲುಗೈ ಸಾಧಿಸುವ ಮೂಲಕ ವಿದ್ಯಾರ್ಥಿನಿಯರು ದಾಖಲೆ ಬರೆದಿದ್ದಾರೆ.

ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ  ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ  597 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಟಾಪರ್​ ಆಗಿದ್ದಾರೆ.

ಉಡುಪಿ ಫಸ್ಟ್​- ಯಾದಗಿರಿ ಲಾಸ್ಟ್​:

ರಾಜ್ಯದಲ್ಲಿ ಉಡುಪಿ ಜಿಲ್ಲೆ 93.90 ಫಲಿತಾಂಶ ಹೊಂದುವ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಶೇ.48.45 ಫಲಿತಾಂಶ ತನ್ನದಾಗಿಸಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

key words: PU results, Girl’s topper, Karnataka

PU results: Girl’s topper in science, arts and commerce

The post ಪಿಯು ಫಲಿತಾಂಶ : ಸೈನ್ಸ್‌, ಆರ್ಟ್ಸ್‌, ಕಾಮರ್ಸ್‌ ಮೂರರಲ್ಲೂ ಹೆಣ್ಮಕ್ಕಳೇ ಟಾಪರ್ಸ್..!‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

IPL 2025: టాస్ గెలిచిన పంజాబ్‌ కింగ్స్‌.. బ్యాటింగ్ ఎవరిదంటే?

ఐపీఎల్-2025లో డిఫెండింగ్ ఛాంపియన్స్ కోల్‌కతా నైట్ రైడర్స్ ఈరోజు పంజాబ్ కింగ్స్‌తో...

ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಕಾಂಗ್ರೆಸ್ ಕಲಿಯಲಿ- ಆರ್.ಅಶೋಕ್

ಬೆಂಗಳೂರು,ಏಪ್ರಿಲ್,26,2025 (www.justkannada.in):  ದೇಶಕ್ಕೆ ಸಂಕಷ್ಟಕ್ಕೆ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ...

വാര്‍ത്ത നല്‍കുന്നവര്‍ക്ക് എന്തും നല്‍കാം, വീണയുടെ മൊഴിയെന്ന പേരില്‍ പ്രചരിക്കുന്ന വാര്‍ത്ത അസത്യം: മുഹമ്മദ് റിയാസ്

തിരുവനന്തപുരം: സി.എം.ആര്‍.എല്‍ കേസില്‍ വീണ.ടിയുടെ മൊഴിയെന്ന പേരില്‍ പ്രചരിക്കുന്ന വാര്‍ത്ത അസത്യമാണെന്ന്...

Jammu kashmir: `சிந்து நதிநீர் ஒப்பந்தம் ஓர் நியாயமற்ற ஆவணம்’ – ஒமர் அப்துல்லா காட்டம்

ஜம்மு - காஷ்மீரின் பஹல்காமில் 26 இந்தியர்கள் கொல்லப்பட்ட கொடூரமான தாக்குதலுக்குப்...